ತ್ರಿವಳಿ ತಲಾಖ್ ರದ್ದತಿ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಹೊಸದಿಲ್ಲಿ, ಸೆ.19: ತ್ರಿವಳಿ ತಲಾಖ್ ರದ್ಧತಿ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತ್ರಿವಳಿ ತಲಾಖ್ ರದ್ಧತಿ ಸುಗ್ರೀವಾಜ್ಞೆಗೆ ಸಮ್ಮತಿ ನೀಡಲಾಗಿದೆ.
ಕಳೆದ ಡಿಸೆಂಬರ್ ನಲ್ಲಿ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಈ ವಿಧೇಯಕವನ್ನು ಅಂಗೀಕರಿಸಲಾಗಿತ್ತು.
ತ್ರಿವಳಿ ತಲಾಖ್ ನೀಡುವುದು ಕ್ರಿಮಿನಲ್ ಅಪರಾಧ . ತ್ರಿವಳಿ ತಲಾಖ್ ನೀಡಿದರೆ ಮೂರು ವರ್ಷಗಳ ಜೈಲು ಶಿಕ್ಷೆ, ದಂಡ ವಿಧಿಸಬಹುದು. ಕ್ರಿಮಿನಲ್ ಪ್ರಕರಣದಡಿ ಬಂಧಿಸಿ ವಿಚಾರಣೆ ನಡೆಸಬಹುದು ಎಂದು ಮಸೂದೆಯಲ್ಲಿ ಹೇಳಲಾಗಿದೆ. ಆದರೆ ಕೆಲವು ಸದಸ್ಯರ ವಿರೋಧದ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳುಗಳಿಂದ ಈ ವಿಧೇಯಕವನ್ನು ರಾಜ್ಯಸಭೆಯಲ್ಲಿ ತಡೆ ಹಿಡಿಯಲಾಗಿತ್ತು.
Next Story