ನಮ್ಮ ಶಾಸಕರು ಮಹಾರಾಷ್ಟ್ರಕ್ಕೆ ಹೋಗಲ್ಲ: ಸತೀಶ್ ಜಾರಕಿಹೊಳಿ
ಹೊಸದಿಲ್ಲಿ, ಸೆ.20: ನಮ್ಮ ಪಕ್ಷದ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಅಲ್ಲದೆ, ಯಾರೂ ಕೂಡ ಮಹಾರಾಷ್ಟ್ರದ ರೆಸಾರ್ಟ್ಗೆ ಹೋಗುತ್ತಿಲ್ಲ. ಇದೆಲ್ಲ ಕೇವಲ ಊಹಾಪೋಹ ಮಾತ್ರ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಗುರುವಾರ ಹೊಸದಿಲ್ಲಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಾರ್ಗದರ್ಶನದಂತೆ ನಾವು ಮುಂದುವರೆಯುತ್ತೇವೆ ಎಂದರು.
ಮುಂಬರುವ ಲೋಕಸಭಾ ಚುನಾವಣೆ ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವ ಸಂಬಂಧ ನಾವು ಸಮಾಲೋಚನೆ ಮಾಡಿದ್ದೇವೆ. ಪಕ್ಷವನ್ನು ಮತ್ತಷ್ಟು ನಮ್ಮ ಮುಂದಿರುವ ಗುರಿ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗಳ ಕುರಿತು ಮಾತುಕತೆ ನಡೆಸುತ್ತಾರೆ. ನಾನು ಈ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದು ಅವರು ತಿಳಿಸಿದರು.
Next Story