ಭಾರತ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ: ಕೇಂದ್ರ ಸಚಿವ ಗಡ್ಕರಿ
ಹೊಸದಿಲ್ಲಿ, ಅ.4: ‘‘ದೊಡ್ಡ ಪ್ರಮಾಣದ ತೈಲ ಆಮದು ಮಾಡಿಕೊಳ್ಳುತ್ತಿರುವ ಕಾರಣ ಭಾರತ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ’’ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿರುವ ರೂಪಾಯಿ ಬೆಲೆ ಹಾಗೂ ದೇಶದಲ್ಲಿ ವ್ಯಾಪಾರ ಕೊರತೆ ವಿಸ್ತಾರವಾಗುತ್ತಿರುವ ಬಗ್ಗೆ ಚರ್ಚಿಸಲು ಪ್ರಮುಖ ಸಚಿವರ ಸಭೆಗೆ ಮುನ್ನಾದಿನ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ.
ವಿಶ್ವದ ಮೂರನೇ ದೊಡ್ಡ ತೈಲ ಆಮದು ದೇಶವಾಗಿರುವ ಭಾರತ 80 ಶೇ. ತೈಲ ಬೇಡಿಕೆ ಪೂರೈಸಲು ವಿದೇಶಿ ಮಾರುಕಟ್ಟೆಯನ್ನೇ ನೆಚ್ಚಿಕೊಂಡಿದೆ.
Next Story