ಆಂಧ್ರದ ಶ್ರೀಕಾಕುಳಂನಲ್ಲಿ ತಿತ್ಲಿ ಅಬ್ಬರ; ಭೂ ಕುಸಿತಕ್ಕೆ ಇಬ್ಬರು ಬಲಿ
ಹೈದರಾಬಾದ್ , ಅ.11:ಹೈದರಾಬಾದ್ , ಅ.11: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸಾಕ್ಕೆ ತಿತ್ಲಿ ಚಂಡ ಮಾರುತ ಅಪ್ಪಳಿಸಿದ್ದು , ಚಂಡ ಮಾರುತದ ಅಬ್ಬರಕ್ಕೆ ಹಲವು ರಸ್ತೆಗಳು ಕೊಚ್ಚಿ ಹೋಗಿವೆ. ಪಲಾಸಾದಲ್ಲಿ ಭೂ ಕುಸಿತಕ್ಕೆ ಇಬ್ಬರು ಬಲಿಯಾಗಿದ್ದಾರೆ.
ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಗಾಳಿಗೆ ಹಲವು ಮನೆಗಳಿಗೆ ಹಾನಿಯಾಗಿದೆ. ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ವಿಮಾನಗಳ ಹಾರಾಟ , ರೈಲುಗಳ ಓಡಾಟ ಸ್ಥಗಿತಗೊಂಡಿದೆ.ಹಲವಡೆ ವಿದ್ಯುತ್ ಸಂಪರ್ಕ ಕಡಿದು ಹೋಗಿದೆ.
ತಿತ್ಲಿ ಚಂಡಮಾರುತದ ಪರಿಣಾಮ ಗಂಜಾಂ, ಗಜಪತಿ, ಪೂರಿ, ಕುರ್ದಾ, ಜಗತ್ ಸಿಂಗ್ ಪುರ್ ಮೊದಲಾದ ಐದು ಜಿಲ್ಲೆಗಳಲ್ಲಿ ಬೀರುಗಾಳಿ ಸಹಿತ ಮಳೆಯಾಗುತ್ತಿದೆ .
ಚಂಡಮಾರುತದಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದಿವೆ. ಕೆಲ ಮನೆಗಳಿಗೆ ಹಾನಿಯಾಗಿದೆ. ಗೋಪಾಲ್ಪುರ , ಮೊದಲಾದ ಕಡೆಗಳಲ್ಲಿ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ.
ಗುರುವಾರ ಮುಂಜಾನೆಯಿಂದ ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ಪುರದಲ್ಲಿ ಗಂಟೆಗೆ 126 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದಿಂದಾಗಿ ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ
ಒಡಿಶಾದ 5 ಜಿಲ್ಲೆಗಳಲ್ಲಿ ತಗ್ಗುಪ್ರದೇಶದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.