ಕಲ್ಲಿದ್ದಲು ಹಂಚಿಕೆ ಹಗರಣ: ನವೀನ್ ಜಿಂದಾಲ್ಗೆ ಜಾಮೀನು
ಹೊಸದಿಲ್ಲಿ, ಅ. 15: ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿರುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಣ ವಂಚನೆಯ ಆರೋಪಕ್ಕೆ ಒಳಗಾಗಿರುವ ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ನವೀನ್ ಜಿಂದಾಲ್ಗೆ ದಿಲ್ಲಿ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.
ವೈಯುಕ್ತಿಕ ಬಾಂಡ್ 1 ಲಕ್ಷ ರೂ. ಹಾಗೂ ಅದೇ ಮೊತ್ತದ ಶ್ಯೂರಿಟಿ ಆಧಾರದಲ್ಲಿ ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ನವೀನ್ ಜಿಂದಾಲ್ ಅವರಿಗೆ ಜಾಮೀನು ನೀಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಇತರ 14 ಮಂದಿಗೆ ಕೂಡ ನ್ಯಾಯಾಲಯ ಜಾಮೀನು ನೀಡಿದೆ.
Next Story