ಕಾಶ್ಮೀರದಲ್ಲಿ ಉಗ್ರವಾದಿಗಳೊಂದಿಗೆ ಗುಂಡಿನ ಕಾಳಗದಲ್ಲಿ ಸಿಐಎಸ್ಎಫ್ ಅಧಿಕಾರಿ ಮೃತ್ಯು
ಸಾಂದರ್ಭಿಕ ಚಿತ್ರ
ಶ್ರೀನಗರ,ಅ.27: ಶುಕ್ರವಾರ ರಾತ್ರಿ ಶ್ರೀನಗರದ ನೌಗಾಮ್ ಪ್ರದೇಶದಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯ ಅಧಿಕಾರಿಯೋರ್ವರು ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ನೌಗಾಮ್ ಪ್ರದೇಶದ ವಗೂರಾದ ಗ್ರಿಡ್ ಸ್ಟೇಷನ್ನಲ್ಲಿ ಉಗ್ರರು ದಾಳಿ ನಡೆಸಿದ ಸಂದರ್ಭ ಸಿಐಎಸ್ಎಫ್ನ ಎಎಸ್ಐ ರಾಜೇಂದ್ರ ಪ್ರಸಾದ್ ಅವರು ತೀವ್ರವಾಗಿ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಜಾಗ್ರತ ಕಾವಲುಗಾರರು ದಾಳಿಕೋರರನ್ನು ಹಿಮ್ಮೆಟ್ಟಿಸುವಲ್ಲಿ ಸಫಲರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ಶನಿವಾರ ತಿಳಿಸಿದರು.
ಬುಧವಾರ ನೌಗಾಮ್ ಪ್ರದೇಶದಲ್ಲಿ ಓರ್ವ ಪಿಎಚ್ಡಿ ಪದವೀಧರ ಸೇರಿದಂತೆ ಹಿಝ್ಬುಲ್ ಮುಜಾಹಿದೀನ್ನ ಇಬ್ಬರು ಉಗ್ರರು ಭದ್ರತಾ ಪಡೆಗಳ ಗುಂಡುಗಳಿಗೆ ಬಲಿಯಾಗಿದ್ದರು.
Next Story