ಅಮಿತ್ ಶಾ-ವಸುಂಧರಾ ರಾಜೆ ನಡುವಿನ ಶೀತಲ ಸಮರ ತಾರಕಕ್ಕೆ
ಮಧ್ಯ ಪ್ರವೇಶಿಸಲಿರುವ ಪ್ರಧಾನಿ ಮೋದಿ
ಹೊಸದಿಲ್ಲಿ, ನ.7: ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ವಿಚಾರಕ್ಕೆ ಸಂಬಂಧಿಸಿ ಅಮಿತ್ ಶಾ ಮತ್ತು ಸಿಎಂ ವಸುಂಧರಾ ರಾಜೆ ನಡುವಿನ ಶೀತಲ ಸಮರ ತಾರಕಕ್ಕೇರಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಲಿದ್ದಾರೆ ಎನ್ನಲಾಗಿದೆ.
“ಕೇಂದ್ರ ನಾಯಕತ್ವ ಮತ್ತು ಮುಖ್ಯಮಂತ್ರಿಯ ನಡುವಿನ ಅಭಿಪ್ರಾಯಗಳಲ್ಲಿ ವ್ಯತ್ಯಾಸಗಳಿವೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾಗಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ಮಧ್ಯ ಪ್ರವೇಶಿಸಲಿದ್ದಾರೆ ಎಂದವರು ಹೇಳಿದ್ದಾರೆ ಎಂದು ವರದಿಯಾಗಿದೆ.
ತನ್ನದೇ ಕ್ಯಾಂಪ್ ನ ಹಾಲಿ ಶಾಸಕರಿಗೆ ಮತ್ತೊಮ್ಮೆ ಟಿಕೆಟ್ ನೀಡಲು ರಾಜೆ ಮುಂದಾಗಿದ್ದರೆ, ಅಮಿತ್ ಶಾ ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದಾರೆ ಎನ್ನಲಾಗಿದೆ.
Next Story