ಪ್ರತಿಯೊಬ್ಬ ಭಾರತೀಯನಿಗೂ ಆತಂಕದ ವಿಚಾರ: ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್
ಊರ್ಜಿತ್ ಪಟೇಲ್ ರಾಜೀನಾಮೆ
ಹೊಸದಿಲ್ಲಿ, ಡಿ.10: ಆರ್ ಬಿಐ ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿರುವ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್, “ಇದು ಪ್ರತಿಯೊಬ್ಬ ಭಾರತೀಯನಿಗೂ ಆತಂಕದ ವಿಚಾರ” ಎಂದಿದ್ದಾರೆ.
“ಅವರ ಅಭಿಪ್ರಾಯವನ್ನು ಗೌರವಿಸಬೇಕು. ಈ ನಿರ್ಧಾರ ಕೈಗೊಳ್ಳಲು ಕಾರಣವಾದ ಬಿಕ್ಕಟ್ಟಿನ ಬಗ್ಗೆ ನಾವು ತಿಳಿದುಕೊಳ್ಳಬೇಕು. ಬೆಳವಣಿಗೆ ಮತ್ತು ಸುಸ್ಥಿರ ಬೆಳವಣಿಗೆ ಹಾಗು ಆರ್ಥಿಕತೆಗೆ ನಮ್ಮ ಸಂಸ್ಥೆಯ ಶಕ್ತಿಯು ಅತ್ಯಂತ ಅಗತ್ಯವಾಗಿರುವುದರಿಂದ ಅವರ ರಾಜೀನಾಮೆಯು ಪ್ರತಿಯೊಬ್ಬ ಭಾರತೀಯನಿಗೂ ಆತಂಕದ ವಿಚಾರ” ಎಂದವರು ಹೇಳಿದ್ದಾರೆ.
Next Story