ಇನ್ನು ಮುಂದೆ ಬ್ಯಾಂಕ್ ಖಾತೆಗಳಿಗೆ, ಮೊಬೈಲ್ ಸಂಪರ್ಕಕ್ಕೆ ಆಧಾರ್ ಕಡ್ಡಾಯವಲ್ಲ
ಕಾನೂನು ತಿದ್ದುಪಡಿಗೆ ಕೇಂದ್ರ ಸಂಪುಟ ಒಪ್ಪಿಗೆ
ಹೊಸದಿಲ್ಲಿ, ಡಿ.17: ಆಧಾರ್ ಕುರಿತಂತೆ ಈಗ ಇರುವ ಕಾನೂನಿನ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇನ್ನು ಮುಂದೆ ಬ್ಯಾಂಕ್ ಖಾತೆಗಳು ಮತ್ತು ಮೊಬೈಲ್ ಫೋನ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಾಗಿರುವುದಿಲ್ಲ.
ಸೆಪ್ಟಂಬರ್ 26ರಂದು ಈ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿತ್ತು. ಮೊಬೈಲ್ ಫೋನ್ ಗಳು ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದೂ ಸುಪ್ರೀಂ ಕೋರ್ಟ್ ತಿಳಿಸಿತ್ತು.
Next Story