ಕಾಂಗ್ರೆಸ್ಗಿಂತ ಬಿಜೆಪಿ ಹೆಚ್ಚು ಅಪಾಯಕಾರಿ: ಚಂದ್ರಬಾಬು ನಾಯ್ಡು
ಅಮರಾವತಿ, ಡಿ. 24: ಕಾಂಗ್ರೆಸ್ಗಿಂತ ಬಿಜೆಪಿ ಹೆಚ್ಚು ಅಪಾಯಕಾರಿ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಇದು ಸತ್ಯ. ಕಾಂಗ್ರೆಸ್ ಈ ಹಿಂದೆ ರಾಜ್ಯಕ್ಕೆ ನಷ್ಟ ಉಂಟು ಮಾಡಿದೆ. ಆದರೆ, ಅದು ಆಂಧ್ರಪ್ರದೇಶಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವುದಕ್ಕೆ ಬೆಂಬಲ ನೀಡಲು ಸಿದ್ದವಿದೆ. ಬಿಜೆಪಿ ಆಂಧ್ರಪ್ರದೇಶ ಮರು ಸಂಘಟನೆ ಕಾಯ್ದೆ ಅನುಷ್ಠಾನಗೊಳಿಸಿಲ್ಲ. ಅದು ನಮ್ಮ ರಾಜ್ಯಕ್ಕೆ ವಂಚಿಸಿದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ಗಿಂತ ಬಿಜೆಪಿ ಹೆಚ್ಚು ಅಪಾಯಕಾರಿ ಎಂದು ಅವರು ಹೇಳಿದರು.
ತಮ್ಮ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಆಗ್ರಹಿಸಿದ ಚಂದ್ರಬಾಬು ನಾಯ್ಡ, ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ಕುರಿತು ಶ್ರಿಕಾಕುಳಂನಲ್ಲಿ ಶನಿವಾರ ನಡೆದ ‘ನ್ಯಾಯಕ್ಕಾಗಿ ಹೋರಾಟ’ ಕಾರ್ಯಕ್ರಮದಲ್ಲಿ ಹೇಳಿದರು.
ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶಕ್ಕೆ ಪ್ರತ್ಯೇಕ ಸ್ಥಾನಮಾನ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಿರುವ ಮೂಲಕ ಅವರು ವಂಚಿಸಿರುವುದು ಮಾತ್ರವಲ್ಲ. ಇತರ 11 ರಾಜ್ಯಗಳಿಗೆ ವಿಶೇಷ ಸ್ಥಾನ ಮಾನ ನೀಡುವ ಮೂಲಕ ವಂಚಿಸಿದ್ದಾರೆ ಎಂದು ಚಂದ್ರಬಾಬು ನಾಯ್ಡು ಹೇಳಿದರು.