ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ: ನ್ಯಾಯಾಲಯದ ಘೋಷಣೆ
ಮುಂಬೈ, ಜ.5: ದೇಶದ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂ.ಗಳನ್ನು ಬಾಕಿಯಿರಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ‘ದೇಶಭ್ರಷ್ಟ ಆರ್ಥಿಕ ಅಪರಾಧಿ’ ಎಂದು ಮುಂಬೈಯ ಕೋರ್ಟ್ ಘೋಷಿಸಿದೆ. ನೂತನ ವಂಚನೆ ವಿರೋಧಿ ಕಾನೂನಿನಡಿ ಪ್ರಕರಣ ದಾಖಲಿಸಲಾಗಿರುವ ಮೊದಲ ಉದ್ಯಮಿಯಾಗಿದ್ದಾರೆ ಮಲ್ಯ,
ವಿಜಯ್ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಬೇಕೆಂದು ಕೋರಿ ಜಾರಿ ನಿರ್ದೇಶನಾಲಯದ ಅರ್ಜಿಯ ವಿಚಾರಣೆಯನ್ನು ಭ್ರಷ್ಟಾಚಾರ ವಿರೋಧಿ ನ್ಯಾಯಾಲಯ ನಡೆಸುತ್ತಿತ್ತು.
Next Story