ತಿರುವನಂತಪುರ: ಆರೆಸ್ಸೆಸ್, ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ
ತಿರುವನಂತಪುರ, ಫೆ. 7: ಕೇರಳದ ತಿರುವನಂತಪುರದ ಪಲ್ಕುಲಂಗಾರ ಪ್ರದೇಶದಲ್ಲಿ ಗುರುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ ಇಬ್ಬರು ಆರೆಸ್ಸೆಸ್ ಕಾರ್ಯಕರ್ತರು ಹಾಗೂ ಇಬ್ಬರು ಡಿವೈಎಫ್ಐ ಕಾರ್ಯಕರ್ತರು ಗಾಯಗೊಂಡಿದ್ದಾರೆ.
ನಗರದ ದಲ್ವಾ ಜಂಕ್ಷನ್ನಲ್ಲಿ ಮುಂಜಾನೆ 1 ಗಂಟೆಗೆ ಈ ಘರ್ಷಣೆ ನಡೆದಿದೆ. ಗಾಯಗೊಂಡವರನ್ನು ತಿರುವನಂತಪುರ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದೆ. ವಂಚಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ನಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸಿಪಿಎಂ ಕಾರ್ಯಕರ್ತನೋರ್ವನನ್ನು ಇರಿದು ಹತ್ಯೆಗೈಯಲಾಗಿತ್ತು. ಈ ಹತ್ಯೆಗೆ ಬಿಜೆಪಿ ಹಾಗೂ ಆರೆಸ್ಸೆಸ್ ಕಾರಣ ಎಂದು ಸಿಪಿಎಂ ಆರೋಪಿಸಿತ್ತು.
Next Story