ಓರ್ವ ಉಗ್ರನನ್ನು ಹೊಡೆದುರುಳಿದ ಭಾರತದ ಭದ್ರತಾ ಪಡೆ
ಶ್ರೀನಗರ, ಫೆ.22: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಸೋಪೊರಾದ ವಾರ್ಪೊರಾ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಕಾಳಗದಲ್ಲಿ ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.
ಅಡಗಿಕೊಂಡಿರುವ ಉಗ್ರರಿಗಾಗಿ ಭದ್ರತಾ ಪಡೆ ಶೋಧ ನಡೆಸುತ್ತಿದ್ದಾಗ, ಭದ್ರತಾ ಪಡೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರೆನ್ನಲಾಗಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಭಾರತದ ಯೋಧರು ಹೊಡೆದುರುಳಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Next Story