ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರಜಿನಿಕಾಂತ್
ಚೆನ್ನೈ, ಮಾ.10: ತಮಿಳುನಾಡು ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ರಜಿನಿಕಾಂತ್ ಘೋಷಿಸಿದ್ದಾರೆ.
ತಮಿಳುನಾಡಿನ 21 ವಿಧಾನಸಭಾ ಸ್ಥಾನಗಳಿಗೆ ಶೀಘ್ರವೇ ಉಪಚುನಾವಣೆ ನಡೆಯುವ ನಿರೀಕ್ಷೆಯಿದೆ. ರಜಿನಿಕಾಂತ್ ರಾಜಕೀಯ ಪ್ರವೇಶಿಸುವುದಾಗಿ 2017ರ ಡಿಸೆಂಬರ್ನಲ್ಲಿ ಘೋಷಿಸಿದ್ದರೂ ತಮ್ಮ ರಾಜಕೀಯ ಪಕ್ಷಕ್ಕೆ ಇನ್ನೂ ಅಧಿಕೃತವಾಗಿ ಚಾಲನೆ ನೀಡಿಲ್ಲ.
ಕಳೆದ ತಿಂಗಳು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದ ರಜಿನಿಕಾಂತ್, ತಮ್ಮ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುತ್ತದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದಿದ್ದರು. ತಮಿಳುನಾಡು ರಾಜ್ಯ ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ರಾಷ್ಟ್ರೀಯ ಅಥವಾ ಪ್ರಾದೇಶಿಕ ಪಕ್ಷವನ್ನು ತಮ್ಮ ಪಕ್ಷ ಬೆಂಬಲಿಸಲಿದೆ ಎಂದು ಹೇಳಿದ್ದ ಅವರು, ಕಾವೇರಿ ನದಿ ನೀರು ವಿವಾದ ಸಹಿತ ನೀರಿನ ವಿವಾದಕ್ಕೆ ಶಾಶ್ವತ ಪರಿಹಾರ ರೂಪಿಸುವ ಪಕ್ಷಕ್ಕೆ ಮತ ಹಾಕುವಂತೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದರು.
Next Story