ಪ್ರತಿಪಕ್ಷ ನಾಯಕರ ಮನವಿಗೆ ಉತ್ತರಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ
ಹೊಸದಿಲ್ಲಿ, ಮಾ.15: ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಗೆ ಮೊದಲು ಪ್ರತಿ ಕ್ಷೇತ್ರದ 50 ಶೇ. ಎವಿಎಂಗಳ ವಿವಿಪ್ಯಾಟ್ ಸ್ಲಿಪ್ಗಳನ್ನು ಲೆಕ್ಕ ಮಾಡಬೇಕೆಂಬ ವಿಪಕ್ಷ ನಾಯಕರ ಮನವಿಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಂಜನ್ ಗೊಗೊಯ್ ಹಾಗೂ ಜಸ್ಟಿಸ್ಗಳಾದ ದೀಪಕ್ ಗುಪ್ತಾ ಹಾಗೂ ಸಂಜಯ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠ, ಮಾ.25 ರಂದು ವಿಪಕ್ಷ ನಾಯಕರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಲಿದ್ದು, ನ್ಯಾಯಾಲಯಕ್ಕೆ ಸಹಾಯ ಮಾಡಲು ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹಿತ ಹಲವು ವಿಪಕ್ಷ ನಾಯಕರು ಅರ್ಜಿಗಳನ್ನು ಸಲ್ಲಿಸಿದ್ದರು.
Next Story