ಪತ್ನಿಗೆ ಗುಂಡಿಕ್ಕಿ ಐಎಎಸ್ ಅಧಿಕಾರಿ ಆತ್ಮಹತ್ಯೆ
ಮುಂಬೈ, ಮಾ.22: ಐಎಎಸ್ ಅಧಿಕಾರಿಯೋರ್ವರು ಏರ್ಗನ್ನಿಂದ ಪತ್ನಿಯತ್ತ ಗುಂಡು ಹಾರಿಸಿ ಗಾಯಗೊಳಿಸಿದ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಮಂಗಳವೇಢಾ ಪಟ್ಟಣದ ಮಾರವಾಡೆಯಲ್ಲಿ ಈ ಘಟನೆ ನಡೆದಿದ್ದು,ಆತ್ಮಹತ್ಯೆ ಮಾಡಿಕೊಂಡಿರುವ ಐಎಎಸ್ ಅಧಿಕಾರಿ ವಿಜಯಕುಮಾರ ಭಾಗವತ ಪವಾರ್(57) ಅವರು ರಾಜ್ಯದ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಈ ಹಿಂದೆ ನಂದೂರಬಾರ್ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಗುಂಡೇಟಿನಿಂದ ಗಾಯಗೊಂಡಿರುವ ಪತ್ನಿ ಸೋನಾಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story