ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ 111 ರೈತರಿಂದ ಸ್ಪರ್ಧೆ
ಲೋಕಸಭಾ ಚುನಾವಣೆ
ಹೊಸದಿಲ್ಲಿ, ಮಾ.23: ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಹಲವು ಬಾರಿ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿದ ನಂತರ ಇದೀಗ ತಮಿಳುನಾಡಿನ 111 ರೈತರು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ.
ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ 111 ರೈತರು ಸ್ಪರ್ಧಿಸಲಿದ್ದಾರೆ ಎಂದು ತಮಿಳುನಾಡು ರೈತ ನಾಯಕ ಪಿ.ಅಯ್ಯಾಕಣ್ಣು ಹೇಳಿದ್ದಾರೆ.
“ನಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎನ್ನುವ ಅವರ ಭರವಸೆಗಳನ್ನು ಈಡೇರಿಸಿದ್ದಲ್ಲಿ ಪ್ರಧಾನಿ ವಿರುದ್ಧ ಸ್ಪರ್ಧಿಸುವ ನಿರ್ಧಾರವನ್ನು ಕೈಬಿಡಲಾಗುವುದು” ಎಂದವರು ಹೇಳಿದರು.
ರೈತರು ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರಕ್ಕೆ ಎಲ್ಲಾ ಕಡೆಯ ರೈತರ ಹಾಗು ಆಲ್ ಇಂಡಿಯಾ ಕಿಸಾನ್ ಸಂಘರ್ಷ್ ಸಮನ್ವಯ ಸಮಿತಿಯ ಬೆಂಬಲವಿದೆ ಎಂದು ಹೇಳಿದರು.
Next Story