ಬುರ್ಖಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಜ್ಞಾ ಸಿಂಗ್
ಹೊಸದಿಲ್ಲಿ, ಮೇ 1: ರಾಷ್ಟ್ರೀಯ ಭದ್ರತೆಗಾಗಿ ದೇಶದಲ್ಲಿ ಬುರ್ಖಾ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ವಿವಾದ ಸೃಷ್ಟಿಸಿದ್ದಾರೆ.
“ವಿಮಾನ ನಿಲ್ದಾಣ ಮತ್ತು ವಿದೇಶಗಳಿಗೆ ಭೇಟಿ ನೀಡುವಾಗ ಬುರ್ಖಾಗಳನ್ನು ತೆಗೆಯಬೇಕಾಗುತ್ತದೆ. ಆಗ ನಾವು ಏನೂ ಹೇಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಅವರು (ಮುಸ್ಲಿಮರು) ಈ ನಿರ್ಧಾರವನ್ನು ತೆಗೆದುಕೊಳ್ಳಬೇಕು ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅವರು ಈ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ” ಎಂದು ಪ್ರಜ್ಞಾ ಹೇಳಿದರು.
Next Story