ಬಗ್ಗೆ ಪ್ರಜ್ಞಾ ಸಿಂಗ್ ಹೇಳಿಕೆ: ಆಯೋಗಕ್ಕೆ ವರದಿ ಸಲ್ಲಿಸಿದ ಮ.ಪ್ರದೇಶ ಸಿಇಒ
ಭೋಪಾಲ, ಮೇ 17: ಗಾಂಧೀಜಿಯವರನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆ ಓರ್ವ ದೇಶಭಕ್ತ ಎಂಬ ಭೋಪಾಲ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ಹೇಳಿಕೆಯ ಬಗ್ಗೆ ಮಧ್ಯಪ್ರದೇಶದ ಮುಖ್ಯ ಚುನಾವಣಾಧಿಕಾರಿ ಶುಕ್ರವಾರ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದಾರೆ.
ಪ್ರಜ್ಞಾ ಸಿಂಗ್ ಹೇಳಿಕೆಯ ಬಗ್ಗೆ ಅಗರ್ ಮಾಲ್ವಾ ಜಿಲ್ಲಾ ಚುನಾವಣಾಧಿಕಾರಿ ತನ್ನ ವರದಿಯನ್ನು ಮಧ್ಯಪ್ರದೇಶದ ಮುಖ್ಯ ಚುನಾವಣಾಧಿಕಾರಿ(ಸಿಇಒ)ಗೆ ಸಲ್ಲಿಸಿದ್ದರು. ಈ ವರದಿಯನ್ನು ಪರಿಶೀಲಿಸಿ ಚುನಾವಣಾ ಆಯೋಗಕ್ಕೆ ರವಾನಿಸಲಾಗಿದೆ ಎಂದು ಸಿಇಒ ವಿಎಲ್ ಕಾಂತರಾವ್ ಹೇಳಿದ್ದಾರೆ.
ವರದಿಯಲ್ಲಿ ಏನಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣಾ ಆಯೋಗ ಒಂದು ನಿರ್ಧಾರಕ್ಕೆ ಬಂದ ಬಳಿಕ ವರದಿಯ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
Next Story