ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಗಳ ಕಾರಿಗೆ ಕಲ್ಲೆಸೆತ
ಫೋಟೊ ಕೃಪೆ: twitter.com/@Rajkamalchy
ಹೊಸದಿಲ್ಲಿ, ಮೇ 19: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ 7 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವಂತೆಯೇ ಪಶ್ಚಿಮ ಬಂಗಾಳದ ಕೆಲವೆಡೆ ಹಿಂಸಾಚಾರಗಳು ನಡೆದ ಬಗ್ಗೆ ವರದಿಯಾಗಿದೆ.
ಗುಂಪೊಂದು ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಉತ್ತರ ಕೊಲ್ಕತ್ತಾ ಬಿಜೆಪಿ ಅಭ್ಯರ್ಥಿ ರಾಹುಲ್ ಸಿನ್ಹಾ ಆರೋಪಿಸಿದ್ದಾರೆ. ಇತರ ಇಬ್ಬರು ಬಿಜೆಪಿ ಅಭ್ಯರ್ಥಿಗಳಾದ ಅನುಪಮ್ ಹಝ್ರಾ ಮತ್ತು ನಿಲಾಂಜನ್ ರಾಯ್ ಕಾರುಗಳ ಮೇಲೆ ಕಲ್ಲೆಸೆಯಲಾಗಿದೆ.
Next Story