ಪೂಂಛ್ ವಲಯದಲ್ಲಿ ಐಇಡಿ ಸ್ಫೋಟ: ಓರ್ವ ಯೋಧ ಹುತಾತ್ಮ, 7 ಮಂದಿಗೆ ಗಾಯ
ಪೋಟೊ ಕೃಪೆ: Hindustan Times
ಹೊಸದಿಲ್ಲಿ, ಮೇ 22: ಜಮ್ಮು ಹಾಗೂ ಕಾಶ್ಮೀರದ ಪೂಂಛ್ ವಲಯದ ಗಡಿ ನಿಯಂತ್ರಣ ರೇಖೆಯ ಮೆಂಧಾರ್ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಐಇಡಿ ಸ್ಫೋಟದಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ.
ಜಿಲ್ಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಗಡಿ ಭದ್ರತಾ ಪಡೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ. ಈ ನಡುವೆ ಕುಲ್ಗಾಂವ್ ಜಿಲ್ಲೆಯ ಗೋಪಾಲ್ಪುರ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ. ಉಗ್ರರು ಅಡಗಿದ್ದ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.
Next Story