ಅತ್ಯಾಚಾರ ಆರೋಪಿ ಬಿಎಸ್ಪಿ ಸಂಸದನಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂ ನಕಾರ
ಲಕ್ನೊ, ಮೇ 27: ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ಬಿಎಸ್ಪಿ ಸಂಸದ ಅತುಲ್ ರಾಯ್ಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.
ರಾಯ್ಗೆ ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಮತ್ತು ನ್ಯಾ. ಅನಿರುದ್ಧ ಬೋಸ್ ಅವರಿದ್ದ ರಜಾಪೀಠವು ತಿಳಿಸಿತು. ಅತುಲ್ ರಾಯ್ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮೇ 1ರಂದು ಎಫ್ಐಆರ್ ದಾಖಲಾಗಿತ್ತು. ತನ್ನನ್ನು ಪತ್ನಿಗೆ ಪರಿಚಯ ಮಾಡಿಸುವ ನೆಪದಲ್ಲಿ ಮನೆಗೆ ಕರೆದುಕೊಂಡು ಹೋಗಿದ್ದ ರಾಯ್ ಅತ್ಯಾಚಾರ ಎಸಗಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಳು.
Next Story