ಅತೃಪ್ತ ಶಾಸಕರ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ
ಅತೃಪ್ತ ಶಾಸಕರು ಖುದ್ದಾಗಿ ಸ್ಪೀಕರ್ ಮುಂದೆ ಹಾಜರಾಗುವಂತೆ ಆದೇಶ
ಹೊಸದಿಲ್ಲಿ. ಜು.11: ಸ್ಪೀಕರ್ ವಿರುದ್ಧ ಕರ್ನಾಟಕದ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದ್ದು, ಸ್ಪೀಕರ್ ಮತ್ತು ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅತೃಪ್ತ ಶಾಸಕರು ಇಂದು ಸಂಜೆ 6 ಗಂಟೆಯ ಒಳಗಾಗಿ ಖುದ್ದಾಗಿ ಸ್ಪೀಕರ್ ಮುಂದೆ ಹಾಜರಾಗುವಂತೆ ನ್ಯಾಯಾಲಯ ಆದೇಶ ನೀಡಿದೆ.
ತಮ್ಮ ರಾಜೀನಾಮೆಯನ್ನು ಅಂಗೀಕರಿಸಲು ಸ್ಪೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅತೃಪ್ತ ಶಾಸಕರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಒಟ್ಟು 15 ಮಂದಿ ಶಾಸಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 10 ಮಂದಿಯ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಅವರಿಗೆ ಸ್ಪೀಕರ್ ಮುಂದೆ ಹಾಜರಾಗುವಾಗ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಸುಪ್ರಿಂ ಕೋರ್ಟ್ ಸೂಚನೆ ನೀಡಿದೆ ಎಂದು ಅತೃಪ್ತ ಶಾಸಕರ ಪರ ಸುಪ್ರಿಂ ಕೋರ್ಟ್ ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ತಿಳಿಸಿದ್ದಾರೆ.
Next Story