ವಿಶ್ವಾಸ ಮತ ನಿರ್ಣಯಕ್ಕೆ ಗೈರು ಹಾಜರಾಗಲಿರುವ ಶಾಸಕರು
ಮುಂಬೈ, ಜು. 15: ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಜುಲೈ 18ರ ವಿಶ್ವಾಸ ಮತ ನಿರ್ಣಯದಲ್ಲಿ ಮುಂಬೈಯ ಹೊಟೇಲ್ನಲ್ಲಿ ವಾಸ್ತವ್ಯ ಮಾಡಿರುವ ಶಾಸಕರು ಪಾಲ್ಗೊಳ್ಳುವ ಸಾಧ್ಯತೆ ಇಲ್ಲ. ಸದನದಲ್ಲಿ ಗುರುವಾರ ನಡೆಯಲಿರುವ ಕಾಂಗ್ರೆಸ್-ಜೆಡಿಎಸ್ ಸರಕಾರದ ವಿಶ್ವಾಸಮತ ನಿರ್ಣಯದಲ್ಲಿ ಪಾಲ್ಗೊಳ್ಳಲು ಮುಂಬೈಯಲ್ಲಿರುವ ಅತೃಪ್ತ ಶಾಸಕರು ಬೆಂಗಳೂರಿಗೆ ತೆರಳುವ ಸಾಧ್ಯತೆ ಇಲ್ಲ ಎಂದು ಇಲ್ಲಿ ಶಾಸಕರ ವಾಸ್ತವ್ಯದ ಸಂಯೋಜನೆ ಮಾಡಿದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.
ಮುಂಬೈ ಐಷಾರಾಮಿ ಹೊಟೇಲ್ನಲ್ಲಿ ವಾಸ್ತವ್ಯ ಮಾಡಿರುವ ಶಾಸಕರು ತಮ್ಮ ರಾಜೀನಾಮೆಯನ್ನು ವಿಧಾನ ಸಭೆ ಸ್ಪೀಕರ್ಗೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಬಗ್ಗೆ ಅಚಲವಾಗಿರುವುದರಿಂದ ವಿಶ್ವಾಸಮತ ನಿರ್ಣಯದಲ್ಲಿ ಪಾಲ್ಗೊಳ್ಳಲು ಯಾವುದೇ ಕಾರಣ ಕಾಣಿಸುತ್ತಿಲ್ಲ.
Next Story