ಹೆಚ್ಚಿನ ಗುಂಪು ಹತ್ಯೆ ಘಟನೆಗಳು ‘ಸುಳ್ಳು ಮತ್ತು ನಕಲಿ’ ಎಂದ ಕೇಂದ್ರ ಸಚಿವ ನಕ್ವಿ!
ಹೊಸದಿಲ್ಲಿ, ಜು.21: ದೇಶದಲ್ಲಿ ನಡೆಯುತ್ತಿರುವ ಗುಂಪು ಹತ್ಯೆಗಳ ಬಗ್ಗೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. “ಹೆಚ್ಚಿನ ಗುಂಪು ಹತ್ಯೆಗಳು ಸುಳ್ಳು ಮತ್ತು ನಕಲಿ” ಎಂದು ನಕ್ವಿ ಹೇಳಿದ್ದಾರೆ.
ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, 1947ರಿಂದ ಮುಸ್ಲಿಮರು ಭಾರತದಲ್ಲಿ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂಬ ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಿದ್ದರು.
ನಕ್ವಿ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲ ಖಂಡಿಸಿದ್ದು, “ನಾನು ನಕ್ವಿ ಜೀ ಅವರಿಗೆ ಗೌರವ ನೀಡುತ್ತೇನೆ. ಆದರೆ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಏನು ನಡೆಯುತ್ತಿದೆ ಎನ್ನುವುದು ಅವರಿಗೆ ಗೊತ್ತಿಲ್ಲ” ಎಂದು ಹೇಳಿದ್ದಾರೆ.
Next Story