ಗುಜರಾತ್ ರಾಜ್ಯಪಾಲರಾಗಿ ದೇವವೃತ ಪ್ರಮಾಣ ವಚನ ಸ್ವೀಕಾರ
ಗಾಂಧೀನಗರ, ಜು.22: ಗುಜರಾತ್ ರಾಜ್ಯದ ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವೃತ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಹೈಕೋರ್ಟ್ನ ಪ್ರಭಾರಿ ಮುಖ್ಯ ನ್ಯಾಯಾಧೀಶ ಅನಂತ್ ಎಸ್ ದವೆ ಅಧಿಕಾರದ ಪ್ರಮಾಣವಚನ ಬೋಧಿಸಿದರು. ನಿರ್ಗಮಿತ ರಾಜ್ಯಪಾಲ ಒಪಿ ಕೊಹ್ಲಿ, ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ರಾಜ್ಯ ವಿಧಾನಸಭೆಯ ಸ್ಪೀಕರ್ ರಾಜೇಂದ್ರ ತ್ರಿವೇದಿ, ಸಚಿವ ಸಂಪುಟದ ಸದಸ್ಯರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ದೇವವೃತ ಹಿಮಾಚಲಪ್ರದೇಶದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.
Next Story