ಪ್ರಧಾನಿ ನಿವಾಸದಲ್ಲಿ ಸಚಿವ ಸಂಪುಟ ಸಭೆ: ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಚರ್ಚೆ
11 ಗಂಟೆಗೆ ಪ್ರಮುಖ ನಿರ್ಧಾರ ಪ್ರಕಟ
ಹೊಸದಿಲ್ಲಿ. ಆ.5: ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿವಾಸದಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತೆಯ ಬಗ್ಗೆ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದೆ.
ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ , ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಸಭೆಯಲ್ಲಿ ಕಣಿವೆ ರಾಜ್ಯದ ಪರಿಸ್ಥಿತಿಗೆ ಸಂಬಂಧಿಸಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರವನ್ನು ಗೃಹ ಸಚಿವ ಅಮಿತ್ ಶಾ ಬೆಳಗ್ಗೆ 11:00 ಗಂಟೆಗೆ ಸಂಸತ್ತಿನಲ್ಲಿ ಮತ್ತು 12:00 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಕಟಿಸಲಿದ್ದಾರೆ.
Next Story