ಮೋಜು, ಮಸ್ತಿಯಿಂದ ಆರ್ಥಿಕ ಬಿಕ್ಕಟ್ಟು ಪರಿಹಾರವಾಗದು: ಯೆಚೂರಿ
ಹೊಸದಿಲ್ಲಿ, ಆ. 14: ಡಿಸ್ಕವರಿ ಚಾನೆಲ್ನ ‘ಮ್ಯಾನ್ ವರ್ಸಸ್ ವೈಲ್ಡ್’ನಲ್ಲಿ ಕಾಣಿಸಿಕೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ತರಾಟೆಗೆ ತೆಗೆದುಕೊಂಡಿರುವ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ, ಜಿಮ್ ಕಾರ್ಬೆಟ್ ನ್ಯಾಶನಲ್ ಪಾರ್ಕ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗುವ ಮೂಲಕ ದೇಶದ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
‘ಮ್ಯಾನ್ ವರ್ಸಸ್ ವೈಲ್ಡ್’ ಎಪಿಸೋಡ್ ಸೋಮವಾರ ರಾತ್ರಿ ಪ್ರಸಾರ ಆಗಲಿದೆ. ಕೇಂದ್ರ ಸರಕಾರ 2014ರಿಂದ ಸೃಷ್ಟಿಸಿದ ಆರ್ಥಿಕ ಬಿಕ್ಕಟ್ಟಿಗೆ ಜಿಮ್ ಕಾರ್ಬೆಟ್ ನ್ಯಾಶನಲ್ ಪಾರ್ಕ್ನಲ್ಲಿ ಮೋಜು ಮಸ್ತಿ ಮಾಡುವುದರಿಂದ ಪರಿಹಾರ ದೊರಕದು ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಸಾಮರಸ್ಯ ಕದಡಲು ಕಾರಣವಾಗುವ ವಿಭಜಕತೆ ಹಾಗೂ ಕ್ರೋಧ ಹರಡಿರಿವುದನ್ನು ಹೊರತುಪಡಿಸಿದರೆ ಕೇಂದ್ರ ಸರಕಾರದ ಯಾವುದೇ ರೀತಿಯ ಸುಸಂಬದ್ಧ ಯೋಜನೆಯನ್ನು ನಾನು ಕೇಳಿಲ್ಲ ಎಂದು ಯೆಚೂರಿ ತಿಳಿಸಿದರು.
Next Story