ಪೆಹ್ಲೂ ಖಾನ್ ಹತ್ಯೆ ಪ್ರಕರಣದ ತೀರ್ಪು ಆಘಾತಕಾರಿ: ಪ್ರಿಯಾಂಕಾ ಗಾಂಧಿ
ಜೈಪುರ, ಆ.16: 2 ವರ್ಷದ ಹಿಂದೆ ನಡೆದ ಪೆಹ್ಲೂಖಾನ್ ಹತ್ಯೆ ಪ್ರಕರಣದ ಎಲ್ಲಾ 6 ಆರೋಪಿಗಳನ್ನು ಖುಲಾಸೆಗೊಳಿಸಿರುವ ಕೆಳ ನ್ಯಾಯಾಲಯದ ತೀರ್ಪು ಆಘಾತಕಾರಿಯಾಗಿದೆ. ನಮ್ಮ ದೇಶದಲ್ಲಿ ಅಮಾನವೀಯತೆಗೆ ಯಾವುದೇ ಸ್ಥಾನವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾ ಹೇಳಿದ್ದಾರೆ.
ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ ವಿರುದ್ಧ ರಾಜಸ್ತಾನ ಸರಕಾರ ಜಾರಿಗೆ ತಂದಿರುವ ಹೊಸ ಕಾನೂನು ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಖಾತರಿಪಡಿಸುತ್ತದೆ ಎಂದು ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 15ರಂದು ರಾಜಸ್ತಾನದ ವಿಧಾನಸಭೆಯಲ್ಲಿ ಅಂಗೀಕಾರವಾದ ಹೊಸ ಮಸೂದೆಯಲ್ಲಿ , ಗುಂಪು ಹತ್ಯೆಯಿಂದ ವ್ಯಕ್ತಿ ಮೃತಪಟ್ಟಲ್ಲಿ ಆಗ ದುಷ್ಕರ್ಮಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಸಂತ್ರಸ್ತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಅವಕಾಶವಿದೆ.
Next Story