ಉ. ಪ್ರದೇಶದ ಶಾಲೆಯಲ್ಲಿ ಮಕ್ಕಳಿಗೆ ಉಪ್ಪು, ಚಪಾತಿ ನೀಡಿದ್ದ ವಿಡಿಯೋ ಮಾಡಿದ್ದ ಪತ್ರಕರ್ತನ ವಿರುದ್ಧ ಪ್ರಕರಣ
ಮಿರ್ಝಾಪುರ, ಸೆ.2: ಕೇಂದ್ರ ಸರಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಮಕ್ಕಳಿಗೆ ಉಪ್ಪು ಮತ್ತು ಚಪಾತಿ ನೀಡಿರುವುದನ್ನು ವಿಡಿಯೋ ಮಾಡಿದ್ದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪತ್ರಕರ್ತ ಪವಾನ್ ಜೈಸ್ವಾಲ್ ಮತ್ತು ಸ್ಥಳೀಯ ಗ್ರಾಮದ ಮುಖ್ಯಸ್ಥನ ಪ್ರತಿನಿಧಿ ಉತ್ತರ ಪ್ರದೇಶ ಸರಕಾರದ ವಿರುದ್ಧ ನಡೆಸಿದ ಷಡ್ಯಂತ್ರವಿದು ಎಂದು ಸ್ಥಳೀಯ ಶಿಕ್ಷಣಾಧಿಕಾರಿ ದೂರಿನಲ್ಲಿ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಮಿರ್ಝಾಪುರ ಶಾಲೆಯಲ್ಲಿ ಮಕ್ಕಳು ನೆಲದಲ್ಲಿ ಕುಳಿತು ಉಪ್ಪಿನೊಂದಿಗೆ ಚಪಾತಿ ತಿನ್ನುತ್ತಿರುವ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಪತ್ರಕರ್ತ ಮತ್ತು ಗ್ರಾಮ ಮುಖ್ಯಸ್ಥನ ಪ್ರತಿನಿಧಿಯ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಷಡ್ಯಂತ್ರ ಪ್ರಕರಣ ದಾಖಲಿಸಲಾಗಿದೆ.
Next Story