ದಾವೂದ್ ನಿಕಟವರ್ತಿ ಇಕ್ಬಾಲ್ ಮಿರ್ಚಿಯೊಂದಿಗೆ ಭೂ ವ್ಯವಹಾರ: ಆರೋಪ
ಪ್ರಫುಲ್ ಪಟೇಲ್ಗೆ ಜಾರಿ ನಿರ್ದೇಶನಾಲಯದ ಸಮನ್ಸ್
ಹೊಸದಿಲ್ಲಿ, ಅ. 15: ದಾವೂದ್ ಇಬ್ರಾಹಿಂ ನಿಕಟವರ್ತಿ ಮುಹಮ್ಮದ್ ಇಕ್ಬಾಲ್ ಮೆಮನ್ ಅಲಿಯಾಸ್ ಇಕ್ಬಾಲ್ ಮಿರ್ಚಿಗೆ ಸಂಬಂಧ ಹೊಂದಿದ ಭೂ ವ್ಯವಹಾರ ಪ್ರಕರಣದಲ್ಲಿ ಹೆಸರು ಉಲ್ಲೇಖವಾದ ಎನ್ಸಿಪಿಯ ಹಿರಿಯ ನಾಯಕ ಪ್ರಫುಲ್ ಪಟೇಲ್ಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ನೀಡಿದೆ.
ಅಕ್ಟೋಬರ್ 18ರಂದು ತನ್ನ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಪ್ರಫುಲ್ ಪಟೇಲ್ಗೆ ಸೂಚನೆ ನೀಡಿದೆ. ಇಕ್ಬಾಲ್ ಮಿರ್ಚಿ ದೇಶದಿಂದ ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ನಿಕಟವರ್ತಿ. ಈ ನಡುವೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಪೃಥ್ವಿರಾಜ್ ಚೌಹಾಣ್, ಅವರ ನಡುವೆ ಯಾವುದಾದರೂ ವ್ಯವಹಾರ ನಡೆದಿದೆಯೋ ಇಲ್ಲವೋ ಎಂಬುದನ್ನು ಎನ್ಡಿಎ ಸರಕಾರ ತನಿಖೆ ಮಾಡಬೇಕು ಎಂದಿದ್ದಾರೆ.
Next Story