ತಿಹಾರ್ ಜೈಲಿನಲ್ಲಿ ಡಿಕೆಶಿಯನ್ನು ಭೇಟಿ ಮಾಡಿದ ಕುಮಾರಸ್ವಾಮಿ
ಹೊಸದಿಲ್ಲಿ, ಅ.21: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿಯಾದರು.
ಇಂದು ಬೆಳಗ್ಗೆ ತಿಹಾರ್ ಜೈಲಿಗೆ ಆಗಮಿಸಿದ ಕುಮಾರಸ್ವಾಮಿ ಅವರು ಡಿಕೆಶಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇದೊಂದು ಸೌಹಾರ್ದಯತವಾದ ಭೇಟಿ ಎಂದರು.
ಡಿಕೆಶಿ ವಿರುದ್ಧ ಪ್ರತೀಕಾರದ ರಾಜಕೀಯ ನಡೆಯುತ್ತಿದೆ. ಏಕೆ ಹೀಗಾಯಿತು ಎಂದು ಎಲ್ಲರಿಗೂ ಗೊತ್ತಿದೆ. ಡಿಕೆಶಿ ಇಷ್ಟೆಲ್ಲದರ ನಡುವೆಯೂ ಧೈರ್ಯದಿಂದ ಇದ್ದಾರೆ. ಮುಂದಿನ ಹೋರಾಟಕ್ಕೆ ಮಾನಸಿಕವಾಗಿ ತಯಾರಾಗುತ್ತಿದ್ದಾರೆ. ಎಲ್ಲವನ್ನೂ ಎದುರಿಸಿ ಹೊರಬರುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.
Next Story