ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಪೊಲೀಸ್ ಗೋಲಿಬಾರಿಗೆ ಮೂವರು ಪ್ರತಿಭಟನಕಾರರು ಬಲಿ
ಗುವಾಹಟಿ: ಪೌರತ್ವ ಕಾಯ್ದೆ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಪೊಲೀಸ್ ಗೋಲಿಬಾರಿಗೆ ಮೂವರು ಪ್ರತಿಭಟನಕಾರರು ಮೃತಪಟ್ಟ ಘಟನೆ ಗುವಾಹಟಿಯಲ್ಲಿ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಪೌರತ್ವ ಮಸೂದೆ ಅಂಗೀಕಾರಗೊಂಡ ನಂತರ ಪ್ರತಿಭಟನಕಾರರು ಬೀದಿಗಿಳಿದಿದ್ದು, ಈಗಾಗಲೇ ಅಸ್ಸಾಂನ ಕೆಲವೆಡೆ ಕರ್ಫ್ಯೂ ವಿಧಿಸಲಾಗಿದೆ. ಮುಂದಿನ 48 ಗಂಟೆಗಳವರೆಗೆ ಇಂಟರ್ ನೆಟ್ ಸೇವೆಯನ್ನೂ ರಾಜ್ಯದಲ್ಲಿ ರದ್ದುಗೊಳಿಸಲಾಗಿದೆ.
ಮುಖ್ಯಮಂತ್ರಿ ಸರ್ಬಾನಂದಾ ಸೊನೊವಾಲ್ ಮತ್ತು ಕೇಂದ್ರ ಸಚಿವ ರಾಮೇಶ್ವರ್ ತೇಲಿ ಮನೆ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದಾರೆ.
Next Story