ಪೌರತ್ವ ಕಾಯ್ದೆ ವಿರುದ್ಧ ಹೆಚ್ಚಿದ ಆಕ್ರೋಶ: ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಕಾರರು
Photo: NDTV
ಹೊಸದಿಲ್ಲಿ: ಪೌರತ್ವ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾವಿರಾರು ಪ್ರತಿಭಟನಕಾರರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿರುವ ರೈಲ್ವೆ ನಿಲ್ದಾಣವೊಂದಕ್ಕೆ ಬೆಂಕಿ ಹಚ್ಚಿದ್ದಾರೆ.
ಇಲ್ಲಿನ ಬೆಲ್ದಾಂಗ ರೈಲ್ವೆ ನಿಲ್ದಾಣದಲ್ಲಿದ್ದ ಸಿಬ್ಬಂದಿಯ ಮೇಲೂ ಪ್ರತಿಭಟನನಿರತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
"ಇದ್ದಕ್ಕಿದ್ದಂತೆ ಪ್ರತಿಭಟನಕಾರರು ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಪ್ಲಾಟ್ ಫಾರ್ಮ್ ಮತ್ತು ಇತರ ಕಟ್ಟಡಗಳಿಗೆ ಬೆಂಕಿ ಹಚ್ಚಿದರು. ಸ್ಥಳದಲ್ಲಿದ್ದ ಆರ್ ಪಿಎಫ್ ಸಿಬ್ಬಂದಿ ಅವರನ್ನು ತಡೆಯಲು ಯತ್ನಿಸಿದ್ದು ಅವರಿಗೆ ಪ್ರತಿಭಟನಕಾರರು ಥಳಿಸಿದ್ದಾರೆ" ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
Next Story