ಸೀಮಾಪುರಿ ಹಿಂಸಾಚಾರ ಪ್ರಕರಣ:ಬಂಧಿತ 12 ಜನರಿಗೆ ಜಾಮೀನು
ಸೀಮಾಪುರಿ ಹಿಂಸಾಚಾರ ಪ್ರಕರಣ:ಬಂಧಿತ 12 ಜನರಿಗೆ ಜಾಮೀನು
ಫೈಲ್ ಚಿತ್ರ
ಹೊಸದಿಲ್ಲಿ,ಜ.10: ಸಿಎಎ ವಿರುದ್ಧ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಸೀಮಾಪುರಿ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ 12 ಜನರಿಗೆ ದಿಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಕಳೆದ ತಿಂಗಳು ಸಿಎಎ ವಿರುದ್ಧ ನಡೆದಿದ್ದ ಪ್ರತಿಭಟನೆಗಳ ಸಂದರ್ಭದಲ್ಲಿ ಹಳೇ ದಿಲ್ಲಿಯ ದರಿಯಾಗಂಜ್ ಮತ್ತು ಈಶಾನ್ಯ ದಿಲ್ಲಿಯ ಸೀಮಾಪುರಿಯಲ್ಲಿ ಕಲ್ಲು ತೂರಾಟ ಮತ್ತು ಹಿಂಸಾಚಾರದ ಘಟನೆಗಳು ನಡೆದಿದ್ದವು. ಈ ವೇಳೆ ಕೆಲವು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಬಂಧಿತರ ವಿರುದ್ಧ ಕೊಲೆಯತ್ನ ಆರೋಪವನ್ನು ಹೊರಿಸಲಾಗಿತ್ತು.
Next Story