ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆಯ ತಾಯಿಯನ್ನು ಥಳಿಸಿ ಕೊಂದ ದುಷ್ಕರ್ಮಿಗಳು
ಜಾಮೀನಿನಲ್ಲಿ ಬಿಡುಗಡೆಯಾದ ನಂತರ ಕೃತ್ಯ
ಕಾನ್ಪುರ: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ದುಷ್ಕರ್ಮಿಗಳು ಜಾಮೀನಿನಲ್ಲಿ ಬಿಡುಗಡೆಯಾದ ನಂತರ ಬಾಲಕಿಯ ತಾಯಿಯನ್ನು ಥಳಿಸಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರಲ್ಲಿ ನಡೆದಿದೆ.
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಈ ದುಷ್ಕರ್ಮಿಗಳು ಕಳೆದ ವಾರ ಸಂತ್ರಸ್ತೆಯ ಮನೆಗೆ ನುಗ್ಗಿ ಮನೆಯಲ್ಲಿದ್ದವರಿಗೆ ಥಳಿಸಿದ್ದರು. ಈ ದುಷ್ಕರ್ಮಿಗಳನ್ನು ಆಬಿದ್, ಮಿಂಟು, ಮಹಬೂಬ್, ಚಾಂದ್ ಬಾಬು, ಜಮೀಲ್ ಮತ್ತು ಫಿರೋಝ್ ಎಂದು ಗುರುತಿಸಲಾಗಿದೆ. 2018ರಲ್ಲಿ ಇವರನ್ನು ಕಿರುಕುಳ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಸ್ಥಳೀಯ ನ್ಯಾಯಾಲಯವೊಂದು ಈ ಕಿಡಿಗೇಡಿಗಳಿಗೆ ಜಾಮೀನು ನೀಡಿದ ನಂತರ ಕಳೆದ ಗುರುವಾರ ಬಾಲಕಿಯ ಮನೆಗೆ ನುಗ್ಗಿದ ಇವರು ಪ್ರಕರಣ ಹಿಂಪಡೆಯುವಂತೆ ಹೇಳಿದ್ದರು. ಪ್ರಕರಣ ಹಿಂಪಡೆಯಲು ಮನೆಯವರು ನಿರಾಕರಿಸಿದ್ದು, ದುಷ್ಕರ್ಮಿಗಳು ಥಳಿಸಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯ ತಾಯಿ ಮತ್ತು ಮತ್ತೊಬ್ಬ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬಾಲಕಿಯ ತಾಯಿ ಮೃತಪಟ್ಟಿದ್ದಾರೆ.
A group of five men accused of molesting a young girl, who are currently out on bail, attacked the victim's mother after she refused to withdraw the case in Kanpur. The mother succumbed to injuries at the hospital. @myogiadityanath where is law and order in the state. @Uppolice pic.twitter.com/9FVO7TvCMX
— Saurabh Trivedi (@saurabh3vedi) January 17, 2020