ಸ್ಪೋಟಕ ಪ್ರಕರಣದ ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರಿಗೆ ಹಸ್ತಾಂತರ
ಬೆಂಗಳೂರು, ಜ.22: ಮಂಗಳೂರಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರುವ ಬ್ಯಾಗ್ ನ್ನು ಇಟ್ಟು ಪರಾರಿಯಾಗಿದ್ದ ಪ್ರಕರಣದ ಆರೋಪಿ ಆದಿತ್ಯ ರಾವ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದ ಹಲಸೂರು ಗೇಟ್ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಎಸಿಪಿಗಳಾದ ವಿನಯ್ ಎ ಗಾಂವಕರ್ ಮತ್ತು ಕೆ.ಯು.ಬೆಳ್ಳಿಯಪ್ಪ ನೇತೃತ್ವದ ಪೊಲೀಸರ ತಂಡ ಇಂದು ಬೆಳಗ್ಗೆ ವಿಮಾನದಲ್ಲಿ ತೆರಳಿ ಆತತನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪೊಲೀಸರು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಮಂಗಳೂರಿಗೆ ಕರೆ ತರಲಿದ್ದಾರೆ.
ಆರೋಪಿ ಆದಿತ್ಯ ರಾವ್ ಮಂಗಳೂರಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ತುಂಬಿದ ಬ್ಯಾಗ್ ಇಟ್ಟು ಪರಾರಿಯಾಗಿದ್ದನು. ಬಳಿಕ ಅಲ್ಲಿಂದ ಲಾರಿ ಮೂಲಕ ಬೆಂಗಳೂರಿಗೆ ಪರಾರಿಯಾಗಿ ಇಂದು ಬೆಳಗ್ಗೆ ಬೆಂಗಳೂರಿನ ಡಿಜಿಪಿ ಮತ್ತು ಐಸಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದನು.
Next Story