‘ಗಣರಾಜ್ಯೋತ್ಸವ’ಕ್ಕೆ ದೇಶದ ಜನರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಹೊಸದಿಲ್ಲಿ, ಜ.26: ಪ್ರಧಾನಿ ನರೇಂದ್ರ ಮೋದಿ ಅವರು 71ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯ ಕೋರಿ ರವಿವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.
ದೇಶದ ಪ್ರತಿಯೊಬ್ಬ ಪ್ರಜೆಗೂ ಗಣರಾಜ್ಯೋತ್ಸದ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಗಣರಾಜ್ಯೋತ್ಸವದ ಅಂಗವಾಗಿ ಹೊಸದಿಲ್ಲಿಯ ರಾಜ್ಪಥ್ನಲ್ಲಿ ಬೆಳಗ್ಗೆ 9ರಿಂದ 11:30ರ ತನಕ ಪಥ ಸಂಚಲನ ನಡೆಯಲಿದೆ. ಭವ್ಯ ಸಮಾರಂಭದಲ್ಲಿ ಬ್ರೆಝಿಲ್ ಅಧ್ಯಕ್ಷ ಜೈರ್ ಬೋಲ್ಸನೊರೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದೆ ವೇಳೆ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಜ್ಪಥದಲ್ಲಿ ಧ್ವಜಾರೋಹಣ ಮಾಡಿದ್ದಾರೆ.
Next Story