'ಬಿರಿಯಾನಿ' ಹೇಳಿಕೆ: ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೋಟಿಸ್
ಹೊಸದಿಲ್ಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ.
ದಿಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆದಿತ್ಯನಾಥ್, "ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶಾಹಿನ್ ಬಾಗ್ ನಲ್ಲಿ ಬಿರಿಯಾನಿ ವಿತರಿಸುತ್ತಿದ್ದಾರೆ" ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಗಾಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
Next Story