ಒಮರ್ ಅಬ್ದುಲ್ಲಾ ಗೃಹಬಂಧನ ಪ್ರಶ್ನಿಸಿದ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಾಧೀಶ
ಹೊಸದಿಲ್ಲಿ, ಫೆ. 12: ಜಮ್ಮು ಹಾಗೂ ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗೃಹಬಂಧನ ವಿರೋಧಿಸಿ ಸಲ್ಲಿಸಲಾದ ಮನವಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ನ ಮೂವರು ನ್ಯಾಯಾಧೀಶರಲ್ಲಿ ಓರ್ವರು ಬುಧವಾರ ಹಿಂದೆ ಸರಿದಿದ್ದಾರೆ. ಒಮರ್ ಅಬ್ದುಲ್ಲಾ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲೆಟ್ ಸಲ್ಲಿಸಿದ ಮನವಿಯನ್ನು ಪೀಠ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತಿರುವಂತೆ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವ ತನ್ನ ನಿರ್ಧಾರವನ್ನು ಪ್ರಕಟಿಸಿದರು. ‘‘ನಾನು ಈ ಪ್ರಕರಣದ ವಿಚಾರಣೆಯ ಭಾಗವಾಗಲಾರೆ’’ ಎಂದು ನ್ಯಾಯಮೂರ್ತಿ ಶಾಂತನಗೌಡರ್ ಹೇಳಿದರು. ಈ ಬಗ್ಗೆ ಅವರು ಯಾವುದೇ ವಿವರಣೆ ನೀಡಿಲ್ಲ.
ಈ ಪೀಠದಲ್ಲಿ ಇದ್ದ ಇತರ ನ್ಯಾಯಮೂರ್ತಿಗಳೆಂದರೆ ಎನ್.ವಿ. ರಮಣ ಹಾಗೂ ಸಂಜೀವ್ ಖನ್ನ. ನ್ಯಾಯಮೂರ್ತಿ ಶಾಂತನಗೌಡರ್ ಅವರ ನಿರ್ಧಾರದಿಂದ ಸಾರಾ ಅಬ್ದುಲ್ಲಾ ಅವರು ಸಲ್ಲಿಸಿದ ಮನವಿಯ ವಿಚಾರಣೆಯನ್ನು ಮುಂದೂಡಲಾಯಿತು. ಶುಕ್ರವಾರ ಈ ಪ್ರಕರಣದ ವಿಚಾರಣೆ ನಡೆಸಲು ನೂತ ಪೀಠ ರೂಪುಗೊಳ್ಳಲಿದೆ.
Next Story