ಶಾಂತಿ, ಭ್ರಾತೃತ್ವವನ್ನು ಕಾಪಾಡಿ: ದಿಲ್ಲಿ ಜನತೆಗೆ ಪ್ರಧಾನಿ ಮೋದಿ ಕರೆ
21ಕ್ಕೇರಿದ ಸಾವಿನ ಸಂಖ್ಯೆ
ಹೊಸದಿಲ್ಲಿ: "ಶಾಂತಿ ಮತ್ತು ಭ್ರಾತೃತ್ವವನ್ನು ಕಾಪಾಡಬೇಕು ಎಂದು ನಾನು ದಿಲ್ಲಿಯ ಸಹೋದರ ಮತ್ತು ಸಹೋದರಿಯರಲ್ಲಿ ಮನವಿ ಮಾಡುತ್ತಿದ್ದೇನೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಧಾನಿಯಲ್ಲಿ ರವಿವಾರದಿಂದ ನಡೆಯುತ್ತಿರುವ ಹಿಂಸಾಚಾರದ ನಂತರ ಪ್ರಧಾನಿ ನೀಡುತ್ತಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ.
ಈಗಾಗಲೇ ಹಿಂಸಾಚಾರದಿಂದ ದಿಲ್ಲಿಯಲ್ಲಿ 21 ಮಂದಿ ಮೃತಪಟ್ಟಿದ್ದು, 180 ಮಂದಿ ಗಾಯಗೊಂಡಿದ್ದಾರೆ.
"ದಿಲ್ಲಿಯ ವಿವಿಧ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದೇನೆ. ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿದ್ದಾರೆ" ಎಂದವರು ಹೇಳಿದ್ದಾರೆ.
Next Story