ಉಗ್ರರ ಜೊತೆ ಸಿಕ್ಕಿಬಿದ್ದ ಮಾಜಿ ಪೊಲೀಸ್ ಅಧಿಕಾರಿ ದವೀಂದರ್ ಸಿಂಗ್ಗೆ ನ್ಯಾಯಾಂಗ ಬಂಧನ
ಹೊಸದಿಲ್ಲಿ, ಎ.11: ಈ ವರ್ಷದ ಆರಂಭದಲ್ಲಿ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ವಾಹನವೊಂದರಲ್ಲಿ ಇಬ್ಬರು ಉಗ್ರರನ್ನು ಕರೆದೊಯ್ಯುತ್ತಿದ್ದ ಸಂದರ್ಭ ಬಂಧಿಸಲ್ಪಟ್ಟಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಪೊಲೀಸ್ ಅಧಿಕಾರಿ ದವೀಂದರ್ ಸಿಂಗ್ಗೆ ಒಂದು ತಿಂಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದವೀಂದರ್ ಸಿಂಗ್ರ ಪೊಲೀಸ್ ಕಸ್ಟಡಿ ಅವಧಿ ಎಪ್ರಿಲ್ 10ರಂದು ಕೊನೆಗೊಂಡಿದ್ದು ಆತನನ್ನು ದಿಲ್ಲಿಯ ನ್ಯಾಯಾಲಯದೆದುರು ಹಾಜರುಪಡಿಸಿದಾಗ ಮೇ 6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಜೈನ್ ಆದೇಶ ನೀಡಿದ್ದಾರೆ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಸಹ ಆರೋಪಿಗಳಾದ ಜಾವೇದ್ ಇಕ್ಬಾಲ್, ನವೀದ್ ಮುಷ್ತಾಕ್ ಮತ್ತು ಇಮ್ರಾನ್ ಶಫಿಯನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜನವರಿಯಲ್ಲಿ ದವೀಂದರ್ ಸಿಂಗ್ನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಿಂದ ಅಮಾನತು ಮಾಡಲಾಗಿದ್ದು ಜಮ್ಮು ಕಾಶ್ಮೀರದ ಜೈಲಿನಲ್ಲಿದ್ದ ಸಿಂಗ್ನನ್ನು ದಿಲ್ಲಿಗೆ ಸ್ಥಳಾಂತರಿಸಲಾಗಿದೆ.
Next Story