ಬಿಜೆಪಿ ಶಾಸಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಕೋಲ್ಕತಾ, ಜು.13: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕರೊಬ್ಬರು ಇಂದು ಬೆಳಗ್ಗಿನ ಜಾವ ಮಾರುಕಟ್ಟೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದೊಂದು ಹತ್ಯೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಶಾಸಕ ದೆಬೇಂದ್ರ ನಾಥ್ ರಾಯ್ ತನ್ನ ಮನೆಯಿಂದ ಒಂದು ಕಿ.ಮೀ.ದೂರದಲ್ಲಿರುವ ಮಾರುಕಟ್ಟೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೆಲವು ಜನರು ರಾತ್ರಿ 1 ಗಂಟೆಗೆ ಸುಮಾರಿಗೆ ನಮ್ಮ ಮನೆಗೆ ಬಂದು ರಾಯ್ ಅವರನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ.
ಇಂದು ಬೆಳಗ್ಗೆ ಸ್ಥಳೀಯ ನಿವಾಸಿಗಳು ಅಂಗಡಿಯ ಹೊರಭಾಗದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
"ಬಂಗಾಳದಲ್ಲಿ ಬಿಜೆಪಿಯ ನಾಯಕರ ಕೊಲೆಗೆ ಅಂತ್ಯವಿಲ್ಲವಾಗಿದೆ. ಟಿಎಂಸಿಯನ್ನು ತ್ಯಜಿಸಿದ್ದ ಬಿಜೆಪಿ ಶಾಸಕನನ್ನು ಕೊಲೆ ಮಾಡಲಾಗಿದೆ. ಅವರು ಬಿಜೆಪಿ ಸೇರ್ಪಡೆಯಾಗಿರುವುದಕ್ಕೆ ಹೀಗೆ ಮಾಡಲಾಗಿದೆಯೇ?'' ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಟ್ವೀಟ್ ಮಾಡಿದ್ದಾರೆ.
Next Story