ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ: ಗೆಹ್ಲೋಟ್ ವಿರುದ್ಧ ಮಾಯಾವತಿ ಆಕ್ರೋಶ
ಹೊಸದಿಲ್ಲಿ: ರಾಜಸ್ಥಾನದಲ್ಲಿ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ಬಿಜೆಪಿ ಆರೋಪಕ್ಕೆ ಬಿಎಸ್ ಪಿ ನಾಯಕಿ ಮಾಯಾವತಿ ಧ್ವನಿಗೂಡಿಸಿದ್ದು, ಅಶೋಕ್ ಗೆಹ್ಲೋಟ್ ಸರಕಾರ ಕಾನೂನುಬಾಹಿರವಾಗಿ ವರ್ತಿಸುತ್ತಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಆಗ್ರಹಿಸಿದ್ದಾರೆ.
ಗೆಹ್ಲೋಟ್ ಸರಕಾರ ರಾಜಕೀಯ ನಾಯಕರ ಫೋನ್ ಕದ್ದಾಲಿಕೆ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದ ನಂತರ ಅವರು ಈ ಟ್ವೀಟ್ ಮಾಡಿದ್ದಾರೆ.
“ಮೊದಲನೆಯದಾಗಿ ರಾಜಸ್ಥಾನ ಮುಖ್ಯಮಂತ್ರಿ ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದ್ದಾರೆ ಮತ್ತು ಬಿಎಸ್ ಪಿಯ ಶಾಸಕರನ್ನು ಕಾಂಗ್ರೆಸ್ ಗೆ ಸೆಳೆಯುವ ಮೂಲಕ ದ್ರೋಹ ಬಗೆದಿದ್ದಾರೆ. ಇದೀಗ ಫೋನ್ ಕದ್ದಾಲಿಕೆ ಮೂಲಕ ಮತ್ತೊಂದು ಕಾನೂನು ಬಾಹಿರ ಕ್ರಮ ಕೈಗೊಂಡಿದ್ದಾರೆ” ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
Next Story