ಕಾಂಗ್ರೆಸ್ ಜೊತೆ ಬಿಎಸ್ ಪಿ ಶಾಸಕರ ವಿಲೀನ ಪ್ರಶ್ನಿಸಿ ಬಿಜೆಪಿ ಶಾಸಕ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ರಾಜಸ್ಥಾನ ರಾಜಕೀಯ ಬಿಕ್ಕಟ್ಟು
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಜೊತೆ ಬಿಎಸ್ ಪಿ ಶಾಸಕರ ವಿಲೀನ ಪ್ರಶ್ನಿಸಿ ಬಿಜೆಪಿ ಶಾಸಕ ಮದನ್ ದಿಲಾವರ್ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ವಜಾಗೊಳಿಸಿದೆ.
ಕಾಂಗ್ರೆಸ್ ಪಕ್ಷದ ಜೊತೆ 6 ಬಿಎಸ್ ಪಿ ಶಾಸಕರು ವಿಲೀನಗೊಂಡಿದ್ದನ್ನು ಪ್ರಶ್ನಿಸಿ ದಿಲಾವರ್ ಈ ತಿಂಗಳ ಆರಂಭದಲ್ಲಿ ಅರ್ಜಿ ಸಲ್ಲಿಸಿದ್ದರು. ಬಿಜೆಪಿ ಶಾಸಕರ ಅನರ್ಹಗೊಳಿಸುವಂತೆ ಮಾರ್ಚ್ 16ರಂದು ತಾನು ಸ್ಪೀಕರ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಕ್ಕೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಬಿಜೆಪಿ ಶಾಸಕ ಹೇಳಿಕೆ ನೀಡಿದ್ದರು.
Next Story