ಪಂಜಾಬ್: ವಿಷಕಾರಿ ಮದ್ಯ ಸೇವಿಸಿ 21 ಮಂದಿ ಸಾವು, ಉನ್ನತ ಮಟ್ಟದ ತನಿಖೆಗೆ ಆದೇಶ
ಚಂಡೀಗಡ, ಜು.31: ಪಂಜಾಬ್ನ ವಿವಿಧ ರಾಜ್ಯಗಳಲ್ಲಿ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಅಮೃತಸರ, ಗುರುದಾಸ್ಪುರ ಹಾಗೂ ಟರನ್ ಟರನ್ನಲ್ಲಿ ಶಂಕಿತ ವಿಷಕಾರಿ ಮದ್ಯ ಸೇವಿಸಿ ಜನರು ಸಾವನ್ನಪ್ಪಿರುವ ಘಟನೆಯ ಕುರಿತು ಮ್ಯಾಜಿಸ್ಟಿರಿಯಲ್ ತನಿಖೆಗೆ ಆದೇಶಿಸಲಾಗಿದೆ. ಜಲಂಧರ್ ವಿಭಾಗದ ಆಯುಕ್ತರು ಘಟನೆಯ ತನಿಖೆ ನಡೆಸಿ ಸಂಬಂಧಪಟ್ಟ ಎಸ್ಎಸ್ಪಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಿದ್ದಾರೆ. ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಅಮರಿಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Next Story