ರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನ ಸೋಂಕು ದೃಢ
ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮಹಂತ್ ನೃತ್ಯ ಗೋಪಾಲ್ ದಾಸ್
ಅಯೋಧ್ಯೆ: ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರೊಂದಿಗೆ ವೇದಿಕೆ ಹಂಚಿಕೊಂಡಿದ್ದ ರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ಅವರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.
ಉತ್ತರ ಪ್ರದೇಶದಲ್ಲಿ ಆಗಸ್ಟ್ 5ರಂದು ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದ ಐವರಲ್ಲಿ ಮಹಂತ್ ನೃತ್ಯ ಗೋಪಾಲ್ ದಾಸ್ ಕೂಡ ಒಬ್ಬರು.
ವೇದಿಕೆಯಲ್ಲಿದ್ದ ಇತರರೆಂದರೆ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮೋಹನ್ ಭಾಗವತ್.
ಕಾರ್ಯಕ್ರಮದಕ್ಕೂ ಕೆಲ ದಿನಗಳ ಮೊದಲು ಅರ್ಚಕ ಪ್ರದೀಪ್ ದಾಸ್ ಸೇರಿ ಕರ್ತವ್ಯದಲ್ಲಿದ್ದ 14 ಮಂದಿಗೆ ಕೊರೋನ ವೈರಸ್ ದೃಢಪಟ್ಟಿತ್ತು.
Next Story