ಮುಂಬರುವ ಚುನಾವಣೆಯಲ್ಲಿ ಆಂಧ್ರ, ತೆಲಂಗಾಣದಲ್ಲಿ ಜನಸೇನಾ ಪಕ್ಷ ಸ್ಪರ್ಧೆ: ನಟ ಪವನ್ ಕಲ್ಯಾಣ್
ಹೈದರಾಬಾದ್, ಮಾ.14: ಮುಂಬರುವ 2019ರ ಚುನಾವಣೆಯಲ್ಲಿ ಆಂಧ್ರ, ತೆಲಂಗಾಣದಲ್ಲಿ ಜನಸೇನಾ ಪಕ್ಷ ಸ್ಪರ್ಧಿಸಲಿದೆ ಎಂದು ಜನಸೇನಾ ಪಕ್ಷದ ಅಧ್ಯಕ್ಷ, ನಟ ಪವನ್ ಕಲ್ಯಾಣ್ ತಿಳಿಸಿದ್ದಾರೆ.
ಹೈದರಾಬಾದ್ನಲ್ಲಿ ಇಂದು ಪಕ್ಷದ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಪಕ್ಷದ ವೆಬ್ಸೈಟ್ಗೆ ಚಾಲನೆ ನೀಡಿದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಯುವಕರಿಗೆ ಆದ್ಯತೆ ನೀಡಲಾಗುವುದು. ಜನರ ಸಮಸ್ಯೆಗಳಿಗೆ ಜನಸೇನಾ ಪಕ್ಷ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಸಹೋದರ ಚಿರಂಜೀವಿ ಜನಸೇನಾ ಪಕ್ಷ ಸೇರುವುದಿಲ್ಲ ಎಂದು ಪವನ್ ಕಲ್ಯಾಣ್ ಸ್ಪಷ್ಟಪಡಿಸಿದರು.
Next Story