ಆಂಧ್ರದಲ್ಲಿ ಅಂಗಡಿಗಳಿಗೆ ನುಗ್ಗಿದ ಲಾರಿ; 20 ಸಾವು
ಚಿತ್ತೂರು, ಎ.21:ಅಂಗಡಿಗಳಿಗೆ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನುಗ್ಗಿದ ಪರಿಣಾಮವಾಗಿ 20 ಮಂದಿ ಮೃತಪಟ್ಟ ಘಟನೆ ಆಂಧ್ರದ ಚಿತ್ತೂರು ಜಿಲ್ಲೆಯ ಎರ್ಪೆಡು ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಹಲವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ತಿರುಪತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮೊದಲು ಟಾಟಾಸುಮ, ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ವಿತ್ಯುತ್ ಹರಿದು ಹಲವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
Next Story