ಪ್ರಧಾನಿ ಭೇಟಿಗೆ ಮುಂದಾದ ರಜನೀಕಾಂತ್
ಚೆನ್ನೈ, ಮೇ 21: ಸಕ್ರಿಯ ರಾಜಕಾರಣಕ್ಕೆ ಧುಮುಕುವ ಸುಳಿವು ನೀಡಿರುವ ದಕ್ಷಿಣ ಭಾರತದ ಖ್ಯಾತ ಚಿತ್ರನಟ ರಜನೀಕಾಂತ್ ದಿಲ್ಲಿಯಲ್ಲಿ ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸುವ ನಿರೀಕ್ಷೆ ಇದೆ ಎಂದು ಸೂಪರ್ಸ್ಟಾರ್ನ ಆಪ್ತ ಮೂಲಗಳು ಹೇಳಿವೆ.
ರಜನೀಕಾಂತ್ ಅವರನ್ನು ಬಿಜೆಪಿ ಶನಿವಾರ ಸಂಪರ್ಕಿಸಿದ್ದು, ಈ ವಾರವೇ ಮೋದಿ ಜತೆ ಚರ್ಚೆಗೆ ಆಹ್ವಾನಿಸಿದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ" ಎಂದು ಮೂಲಗಳು ಹೇಳಿವೆ.
ಉಭಯ ಗಣ್ಯರ ಭೇಟಿಯ ಉದ್ದೇಶದ ಬಗ್ಗೆ ಕೇಳಿದ ಪ್ರಶ್ನೆಗೆ, ರಜನೀಕಾಂತ್ ಅವರು ಮುಂದಿನ ದಿನಗಳಲ್ಲಿ ಹೊಸ ರಾಜಕೀಯ ಪಕ್ಷ ಹುಟ್ಟುಹಾಕಲಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಆದರೆ ಬಿಜೆಪಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲು ನಿರಾಕರಿಸಿದೆ. ಈ ನಡೆಯ ಬಗ್ಗೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಮಿಳುನಾಡು ಬಿಜೆಪಿ ಹಿರಿಯ ಮುಖಂಡರು ಹೇಳಿದ್ದಾರೆ.
Next Story